ಡಾ. ವೆಂಕಟಸುಬ್ಬರಾವ್
ಈಗ್ಲೆ ಒಂದು ನೂರಾ ಇಪ್ಪತ್ತೊಂದು ವರ್ಷಗಳ ಹಿಂದೆ ಕಬೀರ್ ಪಂಥದ ತೇಜಃಸ್ವರೂಪಿಯಾದ ಸಾಧುವರೇಣ್ಯರು ಮೋಹಿಗೆ ಭೇಟಿ ನೀಡಿ ಇತ್ತ ಸಂದರ್ಭದಲ್ಲಿ ಅಲ್ಲಿಯೇ ಸೈನಿಕ ಶಾಲೆಯ ಮುಖ್ಯೋಪಾ ಧ್ಯಾಯ ವೃತ್ತಿಯಲ್ಲಿದ್ದ ರಾಮಜೀ ಸಕ್ಬಾಲ ಮತ್ತು ಕಬೀರ್ ಪಂಥನು ಯಾಯಿ ದೈವ ಭಕ್ತೆ ಭೀಮಾಬಾಯಿ ದಂಪತಿಗೆ ದರ್ಶನ ಭಾಗ್ಯ ನೀಡಿ ಅವರ ಮೇಲೆ ಕೃಪಾವಲೋಕನ ಬೀರಿ ಹೃದಯ ತುಂಬಿ ಹರಿಸುತ್ತಾರೆ. ಹದಿಮೂರು ಮಕ್ಕಳನ್ನು ಪಡೆದಿದ್ದ ರಾಮಜೀ ಸಂಸಾರದ ತಾಪತ್ರಯ ಗಳನ್ನು ಆ ಸಾಧುಗಳ ಬಳಿ ಹೇಳಿಕೊಳ್ಳುತ್ತಾ ಬರುವ ಅಲ್ಪ ಸಂಬಳದಿಂದ ಮಕ್ಕಳನ್ನು ಸಾಕುವುದು ಕಷ್ಟವಾಗುವುದು ಎಂಬ ವಾಸ್ತವವನ್ನು ಭಕ್ತಿ ಬಾವದಿಂದ ಅಂತರಂಗವನ್ನು ಬಚ್ಚಿಡುತ್ತಾರೆ. ಸಾಧುಗಳು ಅವರನ್ನು ಪ್ರೀತಿಯಿಂದ ಸಂತೈಸುತ್ತಾ ಈ ಬಗ್ಗೆ ಚಿಂತಿಸಬೇಡ. ‘ನೀನು ಮತ್ತು ನಿನ್ನ ಹೆಂಡತಿಯೂ ಪುಣ್ಯ ಶಾಲಿಗಳು. ಮಹಾ ಪುರುಷನೊಬ್ಬ ನಿಮಗೆ ಮಗನಾಗಿ ಜನಿಸುತ್ತಾನೆ. ನಿನ್ನ ವಂಶಕ್ಕವನು ಬೆಳಕಾಗುತ್ತಾನೆ. ಜಗತ್ತಿನಲ್ಲೆಲ್ಲ ಅವನ ಕೀರ್ತಿ ಪಸರಿಸಿ ಜಗದ್ವಿಖ್ಯಾತವಾಗುವುದು ಎಂಬ ದಿವ್ಯವಾಣಿ ಯೊಂದಿಗೆ ಆಶೀರ್ವದಿಸಿ ಮರಳುತ್ತಾರೆ.
ಆಗ ಭಾರತ ದೇಶದ ಅಸಂಖ್ಯಾತ ಶೋಷಿತರು, ತುಳಿತಕ್ಕೊಳ ಗಾದವರ ಬದುಕಿನ ತುಂಬೆಲ್ಲ ಬರೀ ಕಗ್ಗತ್ತಲು ಆವರಿಸಿಕೊಂಡಿತ್ತು. ಜಾತೀಯತೆ, ಅಸಮಾನತೆ, ಅಸ್ಪೃಶ್ಯತೆ ಹಸಿ ಹಸಿಯಾಗಿ ತಾಂಡವಾ ಡುತ್ತಿತ್ತು. ಮಡಿ ಮೈಲಿಗೆಯ ಭಾವನೆಯು ವಿಸ್ತಾರವಾಗಿ ಚಾಚಿಕೊಂಡು ಪೆಡಂಭೂತವಾಗಿ ಕಾಡುತ್ತಿತ್ತು. ಬ್ರಾಹ್ಮಣ ಕ್ಷತ್ರಿಯ, ವೈಶ್ಯ, ಶೂದ್ರ ಎಂಬ ಚಾತುವರ್ಣ ಪದ್ದತಿಯು ಎಲ್ಲೆಡೆ ತನ್ನ ಛಾಪನ್ನು ಗಟ್ಟಿಯಾಗಿ ಭದ್ರಗೊಳಿಸಿಕೊಂಡಿತ್ತು. ಹೊಲೆಯ, ಮಹರ್, ಮಾದಿಗ, ಸಮಗಾರ, ಚಮಗಾರ, ಚಲವಾದಿ, ಚನ್ನಯ್ಯ, ಡೋಹರ, ಮೋಚಿ, ಮಚ್ಚೆಗಾರ, ಭಂಗಿ, ಮಾಂಗ್, ಮಾಲಾ, ಮುಲ್ಲರ್, ಪರಯಾ, ಪುಲಯ, ಜಾತವ, ವಾಲ್ಮೀಕಿ, ದೋಮ್, ಮೌರ್ಯ ಇತ್ಯಾದಿ ಇತ್ಯಾದಿ..... ಹೀಗೆ ದೇಶದ ವಿವಿಧ ರಾಜ್ಯಗಳಲ್ಲಿ ನೂರಾರು ಹೆಸರುಗಳಿಂದ ಕರೆಯಲ್ಪಡುತ್ತಿರುವ ‘ಅಸ್ಪೃಶ್ಯರು (ಸವರ್ಣಿಯರು ಇಟ್ಟ ಹೆಸರು) ಎಂಬ ನಾಗಾ ಜನಾಂಗ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ, ರಾಜಕೀಯ ಇತ್ಯಾದಿ ಎಲ್ಲಾ ರಂಗದಲ್ಲೂ ಶೋಷಣೆ ಅಸಮಾನತೆಗೆ ತುತ್ತಾಗಿ ಶೋಚನೀಯ ಸ್ಥಿತಿಯನ್ನು ಅನುಭವಿಸುತ್ತಿತ್ತು. ಇಂಥ ಅನೀತಿ, ಅಜ್ಞಾನ, ಅನ್ಯಾಯ, ಮೌಢ್ಯಾಂಧಕಾರ ಕವಿದುಕೊಂಡ ಕಗ್ಗತ್ತಲ ಬಾನಿನಲ್ಲಿ ಬಂಡಾಯದ ಮತ್ತು ಕ್ರಾಂತಿಯ ಕೆಂಪು ದೈವತಾರೆಯಾಗಿ ದಲಿತರು-ದಮನಕ್ಕೊಳಗಾದವರ ಬದುಕಿನ ಹೊಸ ಆಶಾಕಿರಣವಾಗಿ ಭೀಮಾ ಬಾಯಿ ರಾಮಜೀ ದಂಪತಿಗಳಿಗೆ ಹದಿನಾಲ್ಕನೇ ಮಗನಾಗಿ ೧೮೯೧ರ ಎಪ್ರಿಲ್ ೧೪ರಂದು ಡಾ. ಭೀಮರಾವ್ ರಾಮಜೀ ಅಂಬೇಡ್ಕರ್ ಜನ್ಮ ತಾಳುವ ಮೂಲಕ ಸಾಧುವರೇಣ್ಯರು ಹೇಳಿದ ಭವಿಷ್ಯವಾಣಿ ಅಕ್ಷರಶಃ ದಿಟ್ಟವಾಯಿತು. ಈ ಅರ್ಥದಲ್ಲಿ ನಾನು ಲೇಖನದ ಪ್ರಾರಂಭದಲ್ಲಿ ಉಪಯೋಗಿಸಿಕೊಂಡಿರುವ ಕವಿಸಾಲುಗಳು ಅರ್ಥಪೂರ್ಣವಾಗಿದೆ.
ಚಿಕ್ಕಂದಿನಲ್ಲಿಯೇ ಅತ್ಯುತ್ತಮ ಸಂಸ್ಕಾರದ ಸುಸಂಸ್ಕೃತ ಮನೆತನದ ವಾತಾವರಣದಲ್ಲಿ ಬೆಳೆದ ಅಂಬೇಡ್ಕರ್ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ದಪೋಲಿ, ಸತಾರ, ಮುಂಬೈಗಳಲ್ಲಿ ಮುಗಿಸಿಕೊಂಡ ನಂತರ ಮುಂಬೈ, ಕೋಲಂಬಿಯಾ, ಲಂಡನ್ ಮತ್ತು ಬಾನ್ ವಿಶ್ವವಿದ್ಯಾಲ ಯದಲ್ಲಿ ಉನ್ನತ ವ್ಯಾಸಾಂಗ ವನ್ನು ಪೂರೈಸಿ ಕೊಂಡು ಅದ್ವಿತೀಯ ಆದರ್ಶ ಮತ್ತು ಮಹಾನ್ ಮುತ್ಸಧಿ, ಚಿಂತಕ, ವಿದ್ವಾಂಸರಾಗಿ ಹೊರಹೊಮ್ಮಿ ದ್ದೊಂದು ಯಶೋಗಾಧೆ ಎನ್ನುವುದಕ್ಕಿಂತ ಸ್ವಾಭಿಮಾನ, ಸತತಾಭ್ಯಾಸದ ಮನೋವೃತ್ತಿಯೇ ಕಾರಣವೆನ್ನಬೇಕು. ನಂತರ ಬ್ಯಾರಿಷ್ಟರ್ ಪದವಿ ಪಡೆದು ಅವರು ಮುಂಬೈ ಉಚ್ಛ ನ್ಯಾಯಾ ಲಯದಲ್ಲಿ ನ್ಯಾಯವಾದಿಯಾಗಿ ಅಲ್ಲಿನ ಸರ್ಕಾರಿ ಕಾನೂನು ವಿಶ್ವ ವಿದ್ಯಾಲಯದ ಪ್ರಾಚಾರ್ಯರಾಗಿ ಹೆಗ್ಗ ಳಿಕೆಯ ಸೇವೆಗೈದರು.
ಹಿಂದು ಸಮಾಜದ ದುರ್ಬಲ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಶೋಷಿತ-ನಿರ್ಲಕ್ಷಿತ ಅಸ್ಪೃಶ್ಯರ ಸಂಕಷ್ಟಕ್ಕೆ ನೋವಿಗೆ ಮುಖವಾಣಿಯಾಗಿ ನಿಂತವರು ಅಂಬೇಡ್ಕರ್. ತುಳಿತಕ್ಕೊಳಗಾದ ನೊಂದ ಜನಾಂಗಗಳ ಏಳಿಗೆಗಾಗಿ ಪರಿಶ್ರಮ ಪಟ್ಟು ಪರಮಸಾಧನೆಗೈದರು. ತಮ್ಮ ಇಡೀ ಜೀವಿ ತವನ್ನೇ ಅವರಿಗೆ ಅರಿವು, ತಿಳುವಳಿಕೆ ನೀಡುವುದಕ್ಕಾಗಿ ಮುಡಿಪಾಗಿಸಿ ಕೊಂಡರು. ವೇದ, ಶಾಸ್ತೃ, ಆಗಮ ಗ್ರಂಥಗಳನ್ನು, ಪೌರಾತ್ಯ-ಪಾಶ್ವಾತ್ಯ ವಿದ್ವತ್ಪೂರ್ಣ ಅಧ್ಯಯನ-ಅಧ್ಯಾಪನ ನಡೆಸಿ ಕರಗತಮಾಡಿಕೊಂಡ ಮಹಾ ಮೇಧಾವಿ ಅವರು. ದಲಿತ ಜನಾಂಗಕ್ಕೆ ನಾಗರಿಕ ಹಾಗೂ ರಾಜಕೀಯ ಹಕ್ಕುಗಳನ್ನು ದೊರಕಿಸಿಕೊಡಲು ಜೀವನಪೂರ್ತಿ ಹೋರಾಟ ನಡೆಸಿದರು. ದುಂಡುಮೇಜಿನ ಪರಿಷತ್ತಿಗೆ ಹೋಗಿ ಬಂದರು. ಹೋಂ ರೂಲ್ ಬೇಡಿಕೆಗೆ ಒಪ್ಪದೇ ದೇಶಕ್ಕೆ ಸಂಪೂರ್ಣ ಸ್ವಾತಂತ್ರ್ಯ ಬೇಕೆಂದೂ ಅದರಲ್ಲಿ ದಲಿತ ವರ್ಗಕ್ಕೆ ಪೂರ್ಣ ರಕ್ಷಣೆ ಬೇಕೆಂದೂ ಹಠಕ್ಕೆ ಬಿದ್ದು ವಾದಿಸಿದರು. ಜಾತಿವಾರು ತೀರ್ಪು ಹೊರ ಬಂದಾಗ ಅದನ್ನು ಬದ್ದವಾಗಿ ವಿರೋಧಿಸಿ ಮಹಾತ್ಮ ಗಾಂಧೀಜಿಯವರು ಅಮರಣಾಂತ ಉಪವಾಸ ಸತ್ಯಾಗ್ರಹದ ನಾಟಕ ಹೂಡಿ ಬಿಟ್ಟರು! ನಿಮ್ಮ ಜನಾಂಗಕ್ಕೆ ಅಂಬೇಡ್ಕರ್ ಗೆದ್ದುಕೊಟ್ಟಿದ್ದ ರಾಜಕೀಯ ಹಕ್ಕುಗಳ ಪ್ರಭಾವವನ್ನು ಸಂಪೂರ್ಣವಾಗಿ ಕುಗ್ಗಿಸುವುದೇ ಗಾಂಧೀಜಿಯವರ ಉದ್ದೇಶವಾಗಿತ್ತು. ಎಂಬುವುದರಲ್ಲಿ ಅಕ್ಷರಶಃ ಹುರುಳಿದೆ ಎನಿಸುವುದು. ಇಡೀ ದೇಶದ ಮಹಾತ್ಮನ ಜೀವಕ್ಕೆ ಅಂಬೇಡ್ಕರ್ನಿಂದ ಕುತ್ತು ಬಂದೀತೆಂಬ ಅಪವಾದ ಬರಬಾರದೆಂದೂ ಮತ್ತು ಗಾಂಧೀಜಿಯವರ ಸೇವೆಯೂ ದೇಶಕ್ಕೆ ಅಗತ್ಯವಾಗಿರುವುದರಿಂದಲೂ ಅವರ ಅಭಿಮಾನಿಯಾಗಿದ್ದ ಕಾರಣವಾಗಿ ೧೯೩೨ರ ಪೂನಾ ಒಪ್ಪಂದವೆಂಬ ಪ್ರಸಿದ್ದ ಒಡಂಬಡಿಕೆಗೆ ಬಾಬಾ ಸಾಹೇಬ್ ಅಂಬೇಡ್ಕರ್ರು ಒಲ್ಲದ ಮನಸ್ಸಿನ ಅಂಕಿತ ಹಾಕಿ ತಾನೂ ಪರಮನಿಷ್ಠ ದೇಶಭಕ್ತನಾಗಿರುವುದನ್ನು ತೋರಿಸಿಕೊಟ್ಟರು.
ರಾಜ್ಯಾಂಗ ರಚನಾ ಸಭೆಗೆ ಮುಂಬೈ ವಿಧಾನ ಸಭೆಗೆ ಸ್ಪರ್ಧಿಸಿ ಸೋತ ಅಂಬೇಡ್ಕರ್ ೧೯೪೬ರಲ್ಲಿ ಬಂಗಾಳ ವಿಧಾನ ಸಭೆಯಿಂದ ಆಯ್ಕೆಯಾದರು. ಸ್ವತಂತ್ರ ಭಾರತದ ಪ್ರಥಮ ಕಾನೂನು ಸಚಿವರಾಗಿಯೂ ರಾಜ್ಯಾಂಗ ಕರಡು ರಚನಾ ಸಮಿತಿಯ ಅಧ್ಯಕ್ಷರಾಗಿಯೂ ೧೯೪೭ರಲ್ಲಿ ಆಯ್ಕೆಯಾದರು. ಹಿಂದುಗಳಿ ಗೆಲ್ಲ ಸಮಾನ ಕಾನೂನುಕ್ರಮಗಳನ್ನು ಒದಗಿಸುವುದಕ್ಕಾಗಿ ಅವರು ಹಿಂದು ಕೋಡ್ ಬಿಲ್ಲನ್ನು ತಯಾರಿಸಿದರು. ಆದರೆ ದುರ್ದೈವದಿಂದ ಭಾರತ ಪ್ರಧಾನಿ ನೆಹರುರವರ ಬೆಂಬಲ ದೊಕದ್ದರಿಂದ ಆ ಮಸೂದೆ ಪಾಸಾಗಲೇ ಇಲ್ಲ. ಈ ಕಾರಣದಿಂದಲೇ ಅವರು ದಲಿತ ವರ್ಗದವರ ಬಗ್ಗೆ ಸರ್ಕಾರವು ಹೊಂದಿದ್ದ ನಿಷ್ಠಾಳಜಿ, ನಿರಾಶಕ್ತಿಯನ್ನು ಅತ್ಯುಘ್ರವಾಗಿ ಖಂಡಿಸಿ ತಮ್ಮ ಸಚಿವ ಪದವಿಗೆ ರಾಜೀನಾಮೆ ಇತ್ತು ಹೊರಬಂದು ಸ್ವಾಭಿಮಾನವನ್ನು ಮೆರೆಯುತ್ತಾರೆ.
ಅವರ ಬದುಕು-ಭಾಷಣ, ಬರಹ-ಹೋರಾಟ, ಪ್ರಕಾಂಡ ಪಾಂಡಿತ್ಯ, ವ್ಯಕ್ತಿತ್ವದ ಕುರಿತು ಹೇಳಿದಷ್ಟೂ ಕಡಿಮೆ. ಇಂಥ ಒಬ್ಬ ಅಸಾಧರಣ, ನಿರ್ಭೀತ, ನಿರ್ಭಿಡೆಯ ಮಹಾನ್ ವ್ಯಕ್ತಿಯು ಧೀಶಕ್ತಿಯಾಗಿ ಮನುಕುಲದ ಇತಿಹಾಸದಲ್ಲಿ ಹುಟ್ಟಿ ಬಂದದ್ದೇ ಸರ್ವ ಶೋಷಣೆಯಿಂದಲೂ ಮುಕ್ತವಾದ ನವ ಸಮಾಜ ನಿರ್ಮಾಣ ಮಾಡಲು ಎನ್ನಲೇಬೇಕು. ೧೯೩೫ರಲ್ಲಿ ನಾಸಿಕ್ ಜಿಲ್ಲೆಯ ಯಾವೋ ಲಾದಲ್ಲಿ ನಡೆದ ದಲಿತ ವರ್ಗಗಳ ಮಹಾ ಸಮ್ಮೇಳನದಲ್ಲಿ ಅವರು ಎಲ್ಲಾ ದಲಿತರೂ ಹಿಂದೂ ಧರ್ಮವನ್ನು ತ್ಯಜಿಸಿ ಬೌದ್ಧ ಧರ್ಮ ಸ್ವೀಕರಿಸುವಂತೆ ಬಹಿರಂಗ ಕರೆ ನೀಡಿದರು. ನಾನು ಹಿಂದುವಾಗಿ ಹುಟ್ಟಿರುವೇ ದರೂ ಹಿಂದುವಾಗಿ ಸಾಯಲಾರೆ ಎಂಬ ಕ್ರಾಂತಿ ಕಾರಕ ಘೋಷಣೆ ಹೊರಹೊ ಮ್ಮಿದಾಗ ಎಲ್ಲ ಭಾರತೀಯ ಹೃದಯ ಒಮ್ಮೆ ತಲ್ಲಣಗೊಂಡಿರಲೇ ಬೇಕು. ತಮ್ಮ ಅಂತರಾಳದ ಕೂಗಿಗೆ ಕಟಿಬದ್ಧರಾಗಿದ್ದ ಅವರು ೧೯೫೬ರಲ್ಲಿ ತಮ್ಮ ಲಕ್ಷಾಂತರ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದರು. ಈ ಮೂಲಕ ಮಹಾ ಧಾರ್ಮಿಕ ಧುರೀಣರೂ ದೇವನಾಂಪ್ರಿಯ ಚಕ್ರವರ್ತಿ ಅಶೋಕ ಮಹಾಶಯನ ತರುವಾಯ ಭಾರತದಲ್ಲಿ ಬೌದ್ಧ ಪುನರು ದ್ದಾರಕರೂ ಆಗಿ ಬೋಧೀಸತ್ವ ಅಂಬೇಡ್ಕರಾದರು.
ದೀನದಲಿತರು, ವಂಚಿತರು, ದಬ್ಬಾಳಿಕೆಗೊಳಗಾದ ಸ್ತ್ರೀಯರು... ಇವರೆಲ್ಲರ ವಿಮೋಚನೆಗಾಗಿಯೇ ಅಂಬೇಡ್ಕರ ಬದುಕಿದರು, ದುಡಿದರು. ಭಾರತದ ಐಕ್ಯ ಹಾಗೂ ಪುನರ್ ಘಟನೆಗಾಗಿ ಹೋರಾಡಿದ ಈ ವಿಶ್ವಮಾನವ, ಸಾಮಾಜಿಕ ನ್ಯಾಯದ ಹರಿಕಾರ ಹೊಸ ದಿಲ್ಲಿಯ ಅಲಿಪೋರ್ ರಸ್ತೆಯಲ್ಲಿಯ ತಮ್ಮ ೨೬ನೇ ಕ್ರಮ ಸಂಖ್ಯೆಯ ನಿವಾಸದಲ್ಲಿ ೧೯೫೬ನೇ ಡಿಸೆಂಬರ್ ಆರರಂದು ನಿರ್ವಾಣ ಹೊಂದಿದರು.